ನೂಜಿಬಾಳ್ತಿಲ: ಮಾತೃ ವಂದನಾ ಅರಿವು ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26  ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನೂಜಿಬಾಳ್ತಿಲ ಗ್ರಾ.ಪಂ. ನಲ್ಲಿ ನಡೆಯಿತು.








ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರು ಯೋಜನೆಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮಾರಾಮ್‍ದಾಸ್ ಮಾತೃ ವಂದನಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯರಾದ ಪುಷ್ಪಲತಾ, ಜಾನಕಿ, ಹೊನ್ನಮ್ಮ ಉಪಸ್ಥಿತರಿದ್ದರು. ಪಂ.ಅಭಿವೃದ್ಧಿ ಅಧಿಕಾರಿ ಆನಂದ ಎ. ಸ್ವಾಗತಿಸಿ, ವಂದಿಸಿದರು.






Nk Kukke

error: Content is protected !!
Scroll to Top