ಮಂಗಳೂರು ಪೋಲಿಸ್ ಆಯುಕ್ತರನ್ನು ವಾಜಾಗೊಳಿಸದಿದ್ದರೆ ಜಿಲ್ಲಾದ್ಯಂತ ಹೊರಾಟ: ಸಿಎಫ್ ಐ ಎಚ್ಚರಿಕೆ

ಮಂಗಳೂರು, ಡಿ.27: ಮಂಗಳೂರಿನಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತರನ್ನು ವಜಾಗೊಳಿಸುವಂತೆ  ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ರಿಯಾಝ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡವುದು ಜನರ ಹಕ್ಕಾಗಿದೆ. ಹೋರಾಟಗಳನ್ನು ಹತ್ತಿಕ್ಕುವ ಉದ್ದೇಶದಿಂದ ಮಂಗಳೂರಿನಲ್ಲಿ ಕಳೆದ ವಾರ ಏಕಾಏಕಿ ಸೆಕ್ಷನ್ ಜಾರಿ ಮಾಡಿರುವುದು ಪೋಲೀಸರ ಅಧಿಕಾರದ ದುರ್ಬಳಕೆಯಾಗಿದೆ. ಸೆಕ್ಷನ್ ಜಾರಿಯಾಗಿದ್ದ ಕಾರಣ ಜನರು ಗೊಂದಲಕ್ಕೀಡಾಗಿ ಪ್ರತಿಭಟನೆ ಕೈ ಬಿಟ್ಟ ಸಂದೇಶ ಸರಿಯಾಗಿ ತಲುಪಿರಲಿಲ್ಲ. ಈ ಕಾರಣ ದಿನಾಂಕ 19 ರಂದು ಮಂಗಳೂರಿಗೆ ಪ್ರತಿಭಟನಾಕಾರರು ಅಲ್ಪ ಸಂಖ್ಯೆಯಲ್ಲಿ ಬಂದು ಸೇರಿದ್ದರು. ಆ ಜನರನ್ನು ಮನವರಿಕೆ ಮಾಡಿ ವಾಪಾಸ್ ಕಳುಹಿಸುವ ಕೆಲಸಕ್ಕೆ ಪೊಲೀಸರು ಹೋಗದೇ ಅಮಾಯಕರ ಮೇಲೆ ಎರಗಿ ಅಮಾನವೀಯವಾಗಿ ಲಾಠಿ ಚಾರ್ಜ್ ಮಾಡಿ ಆಶ್ರು ವಾಯು ಪ್ರಯೋಗಿಸಿದರಲ್ಲದೇ ಸಾಲದಕ್ಕೆ ಗುಂಡಿನ ದಾಳಿ ನಡೆಸಿ ಎರಡು ಜೀವಗಳನ್ನು ಕೂಡ ತೆಗೆದಿದ್ದಾರೆ ಎಂದರು.

Also Read  ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

ಲಾಠಿ ಚಾರ್ಜ್ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದರೂ ಪೋಲೀಸರು ಅವರ ಮೇಲೂ ಅಮಾನವೀಯವಾಗಿ ಕ್ರೌರ್ಯ ಎಸಗಿದ್ದಾರೆ.  ಒಟ್ಟಾರೆ ಅಂದು ನಡೆದ ಎಲ್ಲಾ ಘಟನೆಗಳಿಗೆ ಮಂಗಳೂರು ಪೋಲೀಸ್ ಆಯುಕ್ತ ಹರ್ಷ ನೇರ ಕಾರಣ. ಅಲ್ಲದೇ ಪೋಲಿಸ್ ವರ್ತನೆಗಳ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದು ಅವರು ಮಸೀದಿ, ಆಸ್ಪತ್ರೆಗಳ ಮೇಲೆ ಅಶ್ರುವಾಯು ಪ್ರಯೋಗ ಹಾಗೂ ಆಸ್ಪತ್ರೆಯ ಐಸಿಯುಗೆ ದಾಳಿ ಮಾಡಿದ್ದಾರೆ. ಆದುದರಿಂದ ಅಂದು ನಡೆದ ಘಟನೆಯ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಯಬೇಕು ಅಮಾಯಕ ವಿದ್ಯಾರ್ಥಿಗಳ ಮೇಲೆ ಹಾಕಿದ ಪ್ರಕರಣಗಳನ್ನು ಕೈಬಿಡಬೇಕು ಮತ್ತು ಕೂಡಲೇ ಮಂಗಳೂರು ಪೋಲಿಸ್ ಆಯುಕ್ತರನ್ನು ಸರಕಾರ ಸೇವೆಯಿಂದ ವಜಾಗೊಳಿಸಬೇಕು‌ ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಜಿಲ್ಲಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಈ ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದರು. ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ಸಾದಿಕ್, ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಉಪಸ್ಥಿತಿತರಿದ್ದರು‌.

Also Read  ಬಲ್ಯ: ಮದುವೆಯಾಗದ ಬಗ್ಗೆ ಮನನೊಂದ ವ್ಯಕ್ತಿ ► ನೇಣುಬಿಗಿದು ಆತ್ಮಹತ್ಯೆ

error: Content is protected !!
Scroll to Top