ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಉಡುಪಿ, ಡಿ.29: ಇಂದು ನಿಧನರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಅಂತಿಮ ಸಾರ್ವಜನಿಕ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ.

ಮಧ್ಯಾಹ್ನದ ಬಳಿಕ ಶ್ರೀಗಳ ಪಾರ್ಥೀವ ಶರೀರವನ್ನು ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಶ್ರೀಗಳನ್ನು ಬೃಂದಾವರಸ್ಥರನ್ನಾಗಿಸಲಾಗುವುದು ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group