ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ

ಮಂಗಳೂರು, ಡಿ.31: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.

ಬಂಧಿತರನ್ನು ಪಾಂಡೇಶ್ವರ ನಿವಾಸಿ ಮೊಯ್ದೀನ್ ಹಮೀಝ್ (25) ಎಂದು ಗುರುತಿಸಲಾಗಿದೆ.

ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಚೋದನಕಾರಿ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group