ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25,000 ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ.


ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಡಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. ಎ4 ಸೈಜ್ ಹಾಳೆಯಲ್ಲಿ ಕನಿಷ್ಟ 100 ಪುಟಗಳಿರುವ ಡಿಟಿಪಿ ಮಾಡಿದ ಕೃತಿಯನ್ನು ಸಲ್ಲಿಸಬೇಕು. 18 ರಿಂದ 40 ವರ್ಷ ಒಳಗಿನ ಯಾವುದೇ ಲೇಖಕರೂ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ (ಜೀವನ ಚರಿತ್ರೆ, ಪ್ರವಾಸ ಕಥನ ಮತ್ತು ಅಂಕಣ ಬರಹ), ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರೆ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಅಭಿನಂದನಾ ಗ್ರಂಥಗಳನ್ನು ಹಾಗೂ ಯಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು, ಯಾವುದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ ಸಮುದಾಯ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರು ಮುಂತಾದವುಗಳ ಕುರಿತು ನೇರವಾಗಿಯೇ ಆಗಲಿ ಪರೋಕ್ಷಗಾಗಿಯೇ ಆಗಲಿ ಮನನೋಯಿಸುವಂತಹ ಹಾಗೂ ರಾಷ್ಟ್ರೀಯ ಭಾವೈಕ್ಯತೆಗಳಿಗೆ ಧಕ್ಕೆ ತರುವಂತಹ ಪ್ರಸ್ತಾಪ ಆಗಿದ್ದಲ್ಲಿ ಅವುಗಳನ್ನು ಪರಿಗಣಿಸಲಾಗುವುದಿಲ್ಲ, ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಈ ವಿಳಾಸಕ್ಕೆ ಜನವರಿ 25 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ 080-22484516 / 22017704 ಸಂಪರ್ಕಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರ, ಆಡಳಿತಧಿಕಾರಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group