ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ: ಸಮ್ಯಕ್ತ್ ತೃತೀಯ

(ನ್ಯೂಸ್ ಕಡಬ) newskadaba.com, ಕಡಬ, ಜ.7   ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮ್ಯಕ್ತ್ ಹೆಚ್.ಜೈನ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಸಿರಿಗನ್ನಡ ವೇದಿಕೆ ಮಂಗಳೂರು ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಬೆಥನಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಮ್ಯಕ್ತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿದ್ದು, ಮೂರು ಕೃತಿಗಳನ್ನು ಅನಾವರಣಗೊಳಿಸಿದ್ದಾರೆ. ಇವರು ನೂಜಿಬಾಳ್ತಿಲ ಗ್ರಾಮದ ಬಸದಿ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ದಂಪತಿ ಪುತ್ರ.

Also Read  ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಎಮರ್ಜಿಂಗ್ ಟೆಕ್ನಾಲಜೀಸ್ ಉದ್ಘಾಟನೆ

error: Content is protected !!
Scroll to Top