ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10 ರಂದು ನಿಧನರಾಗಿದ್ದು, ಅವರ ಗೌರವಾರ್ಥ ಇಂದು (ಜ.13) ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group