ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com, ಕಡಬ, ಜ.20  ಕರ್ನಾಟಕ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದಳ ಮತ್ತು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸುತ್ತಿರುವ ಮುಸ್ಲಿಂ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಮೊದಲಾದ ಸಂಘಟನೆಯನ್ನು ರಾಜ್ಯಾದ್ಯಂತ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಕಡಬ ಪ್ರಖಂಡದ ವತಿಯಿಂದ  ರಾಜ್ಯಪಾಲರು ಮತ್ತು ಗೃಹ ಸಚಿವರಿಗೆ ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ಮುಖಾಂತರ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಕಡಬ ಪ್ರಖಂಡ ಗೌರವಧ್ಯಕ್ಷ ಜನಾರ್ದನ ರಾವ್ , ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ , ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ನಂದುಗುರಿ, ಬಜರಂಗದಳ ಕಡಬ ತಾಲೂಕು ಸಂಯೋಜಕ ಮೂಲಚಂದ್ರ ಕಾಂಚನ, ಸಹ ಸಂಯೋಜಕ ದಿನೇಶ್ ಮಾಸ್ತಿ , ಹಿಂದು ಜಾಗರಣ ವೇದಿಕೆಯ ನಗರ ಕಾರ್ಯದರ್ಶಿ ನಿತ್ಯಾನಂದ ಮೇಲ್ಮನೆ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group