ಬಿಳಿನೆಲೆ: ಮರದಿಂದ ಬಿದ್ದು ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.27. ತೆಂಗಿನಕಾಯಿಯ ಕೀಳಲೆಂದು ತೆಂಗಿನಮರ ಏರಿದ್ದ ವ್ಯಕ್ತಿಯೋರ್ವರು ಕೆಳಗಡೆ ಬಿದ್ದು ಗಾಯಗೊಂಡ ಘಟನೆ ಭಾನುವಾರದಂದು ಪುತ್ತೂರು ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ.

 

ಗಾಯಾಳುವನ್ನು ಬಿಳಿನೆಲೆ ಗ್ರಾಮದ ನೆಟ್ಟಣ ಚೆಂಡೆಹಿತ್ಲು ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ತೆಂಗಿನಕಾಯಿ ಕೀಳಲು ತನ್ನ ಮನೆಯ ಸಮೀಪದ ತೆಂಗಿನ ಮರಕ್ಕೆ ಏರಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗಡೆ ಬಿದ್ದರೆನ್ನಲಾಗಿದೆ. ತಕ್ಷಣವೇ ಅವರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group