ನೆಲ್ಯಾಡಿ: ಮದುವೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಪಲ್ಟಿ ➤ ನಾಲ್ವರು ಗಂಭೀರ, ಹತ್ತಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ‌.16. ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌.

ಪುತ್ತೂರಿನಲ್ಲಿ ನಡೆಯಲಿದ್ದ ಮದುವೆಗೆಂದು ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಿನಿಬಸ್ ನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group