ಪುತ್ತೂರು: ಓಮ್ನಿ ಮತ್ತು ಲಾರಿ ನಡುವೆ ಢಿಕ್ಕಿ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.23. ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.

ಮೃತರನ್ನು ಕೊಡಿಪ್ಪಾಡಿ ನಿವಾಸಿ ನಾರಾಯಣ ಜೋಯಿಷ ಎಂದು ಗುರುತಿಸಲಾಗಿದೆ. ನಾರಾಯಣ ಜೋಯಿಷರು ಪೆರ್ಲಂಪಾಡಿ ತರವಾಡು ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ತನ್ನ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ‌ ಮಂಗಳೂರಿಗೆ‌ ಕರೆದೊಯ್ಯುತ್ತಿರುವಾಗ ಹಾದಿ ಮಧ್ಯೆ ಮೃತಪಟ್ಟಿದ್ದಾರೆ.

error: Content is protected !!

Join the Group

Join WhatsApp Group