ಶಾಕಿಂಗ್ – ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ➤ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.28. ತನ್ನ ಪ್ರೇಯಸಿಯು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್ ನೋಟ್ ಬರೆದಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ಸಮ್ಮದ್ ರಾಯಗೌಡ (23) ಎಂದು ಗುರುತಿಸಲಾಗಿದೆ. ಬಿ.ಇ. ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ಬಳಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಪ್ರೇಯಸಿಯು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು, ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

error: Content is protected !!

Join the Group

Join WhatsApp Group