ತುಮಕೂರು: ಭೀಕರ ಅಪಘಾತ; 12 ಮಂದಿ ಮೃತ್ಯು

ತುಮಕೂರು, ಮಾ.6: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಇಲ್ಲಿನ ಕುಣಿಗಲ್ ಸಮೀಪ ನಡೆದಿದೆ.

ಮೃತರನ್ನು ಮಂಜುನಾಥ್ (35), ತನುಜ (25), ಗೌರಮ್ಮ (60), ರತ್ನಮ್ಮ (52), ಸುಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14), ಬೆಂಗಳೂರಿನ ದೊಡ್ಡ ಆಲದಮರ ಮೂಲದ ಲಕ್ಷ್ಮೀಕಾಂತ್ (24), ಸಂದೀಪ (36), ಮಧು (28) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಬ್ಯಾಲದಕೆರೆ ಸಮೀಪ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಬಳಿಕ ಎದುರಿನಿಂದ ಬರುತ್ತಿದ್ದ ಟವೇರಾ ವಾಹನಕ್ಕೆ ಢಿಕ್ಕಿಯಾಗಿ ಟವೇರಾದಲ್ಲಿದ್ದ ಒಂಬತ್ತು ಹಾಗೂ ಕಾರಿನಲ್ಲಿದ್ದ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ ಢಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಜ್ಜಿ ಹೋಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದು ಅವರ ತಲೆ ಚಿಪ್ಪುಗಳು ಹೊರಬಂದಿದೆ. ಈ ಬಗ್ಗೆ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group