ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ

  • ಭಯ ಪಡುವ ಅಗತ್ಯವಿಲ್ಲ

ಮಂಗಳೂರು, ಮಾ.9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರ ನೀಡಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು. ಈಗ ಅವರನ್ನು ಪರೀಕ್ಷೆಗೆ ಒಳಪಡಿಸಲು ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.

Also Read  ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ 1 ರಿಂದ 4 ರವರೆಗೆ ಇರುವ ಕೋಣೆಗಳನ್ನು ಬಾಡಿಗೆಗೆ ಪಡೆಯಲು ➤ ಅರ್ಜಿ ಆಹ್ವಾನ

error: Content is protected !!
Scroll to Top