ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.15 . ಹಿರಿಯ ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದರು‌. ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ತಡರಾತ್ರಿ 2 ಗಂಟೆಯ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group