ರಾಜ್ಯದಲ್ಲಿಂದು 115 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ

ಬೆಂಗಳೂರು, ಮೇ 28: ರಾಜ್ಯದಲ್ಲಿ ಇಂದು 115 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,533ಕ್ಕೇರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 29 ಸೋಂಕು ಪ್ರಕರಣ ದೃಢವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಸೋಂಕು ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಹಾಸನದಲ್ಲಿ 13 ಪ್ರಕರಣ, ಬೀದರ್‌ನಲ್ಲಿ 12 ಸೋಂಕು ಪ್ರಕರಣ, ಬೆಂಗಳೂರು ನಗರದಲ್ಲಿ 9, ಯಾದಗಿರಿಯಲ್ಲಿ 7, ಕಲಬುರಗಿಯಲ್ಲಿ 5, ಚಿತ್ರದುರ್ಗದಲ್ಲಿ 6, ಹಾವೇರಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರಿನಲ್ಲಿ 1 ಕೋವಿಡ್ ಪ್ರಕರಣ ದೃಢವಾಗಿದೆ.

ರಾಜ್ಯದ ಒಟ್ಟು 2,533 ಪ್ರಕರಣಗಳ ಪೈಕಿ 834 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅದರಲ್ಲೂ 53 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,650 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಸೋಂಕು ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

error: Content is protected !!

Join the Group

Join WhatsApp Group