ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಈಗಾಗಲೇ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.

 

Also Read  ಕರ್ತವ್ಯ ನಿರತ ಟಿ.ಸಿ ಗೆ ಪ್ರಯಾಣಿಕನಿಂದ ಹಲ್ಲೆ..!

 

ಶನಿವಾರ ಮತ್ತೊಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನಹರಿಸಲು ನಿರ್ದೇಶಿಸಲಾಗುವುದು ಎಂದು ಹೇಳಿದರು. ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂನ್ 15ರವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸೇರಿದಂತೆ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ರಾಜ್ಯದಲ್ಲಿ ಒಳನಾಡ ಮೀನುಗಾರಿಕೆ ಅಭಿವೃದ್ಧಿಪಡಿಸಲು ಈಗಾಗಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಮುಂದಿನ 10 ವರ್ಷದಲ್ಲಿ ಮೀನುಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

 

 

 

 

error: Content is protected !!
Scroll to Top