‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಈ ಐದು ಜಿಲ್ಲೆಗಳಿಂದ ಬಿಜೆಪಿ ಯುವ ಮೋರ್ಛಾ ನಡೆಸಲು ಉದ್ದೇಶಿಸಿರುವ ರ್ಯಾಲಿಯಿಂದ ಈಗಾಗಲೇ ಶಾಂತಿಯ ವಾತಾವರಣದಲ್ಲಿರುವ ದಕ್ಷಿಣ ಕನ್ನಡದ ಬೇರೆಬೇರೆ ಭಾಗದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಸದ್ಯಕ್ಕೆ ಪ್ರಿಯ ಸೂಚನೆ ಹಿನ್ನೆಲೆಯಲ್ಲಿ ಮೊದಲ ದಿನವೇ ರ್ಯಾಲಿಗೆ ತಡೆ ನೀಡುವಂತೆ ಗೃಹ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group