ಜೂ. 8ರಿಂದ ರಾಜ್ಯದ ಎಲ್ಲಾ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಜೂ. 7, ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಶಿಕ್ಷಕರು ಜೂ.8 ರಿಂದ ಶಾಲಾ ಕಛೇರಿಯಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಜೂ.8ರಂದು ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದ್ದು,  ಹಾಗೆಯೇ ರಾಜ್ಯಾದ್ಯಂತ ದೂರದ ಊರುಗಳಿಂದ ಬರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಜೂನ್ 8ರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲು ಆದೇಶ ನೀಡಲಾಗಿದೆ.

Also Read  ನಾಪತ್ತೆಯಾಗಿದ್ದ ಕಡಬದ ಯುವಕ ಉಡುಪಿಯಲ್ಲಿ ಪತ್ತೆ

error: Content is protected !!