ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆ ಮಾಡಲಾಗಿದ್ದು ಕೊಲ್ಯ ಸಾರಸ್ವತ ಕಾಲೊನಿ ನಿವಾಸಿ ಚೇತನ್ ಆಚಾರ್ಯ (33) ಎಂದು ಗುರುತ್ತಿಸಲಾಗಿದೆ.ಎರಡು ದಿನದ ಹಿಂದೆ ಮನೆಯಿಂದ ಹೊರಟಿದ್ದ ಚೇತನ್ ಬಳಿಕ ನಾಪತ್ತೆಯಾಗಿದ್ದ.

ಈ ಹಿನ್ನೆಲೆಯಲ್ಲಿ  ಇಂದು ಬೆಳಿಗ್ಗೆ ಚೇತನ್ ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ ಚೇತನ್ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕೆ ವ್ಯಕ್ತವಾಗಿದೆಯಾದರೂ. ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Also Read  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

 

error: Content is protected !!
Scroll to Top