ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.

 

ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ  ನಡೆಯಲಿದೆ.

Also Read  ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

error: Content is protected !!
Scroll to Top