ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನಮರ ➤ ಅಪಾರ ಹಾನಿ, ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ.12, ಇಂದು ಮಧ್ಯಾಹ್ನ ಸುರಿದ ಭಾರೀ ಮಳೆಗೆ ಮನೆಯೊಂದರ ಮಾಡಿನ ಮೇಲೆ ತೆಂಗಿನ ಮರ ಉರುಳಿಬಿದ್ದು ಭಾರೀ ಹಾನಿ ಸಂಭವಿಸಿದ ಘಟನೆ ನಗರದ ಹೊರವಲಯದ ಬೆಂಗ್ರೆ ಮೂಳೂರು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಹೆಂಚಿನ ಮನೆಯ ಮಾಡು ಕುಸಿದು ಲಕ್ಷಾಂತರ ರೂ. ಹಾನಿ ಸಂಭವಿಸಿದ್ದರೆ, ಇಲ್ಲೇ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಹಾನಿ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

Also Read  ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ

error: Content is protected !!
Scroll to Top