ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.04. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಕಾರೊಂದು ಅಪ್ಪಳಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರದಂದು ಉಡುಪಿಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪಣಿಯೂರಿನ ವಿಜಯ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದಾಗ ಕರೆ ಬಂದ ಕಾರಣಕ್ಕಾಗಿ ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬೈಕ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದರು. ವೇಳೆ ಕುಂದಾಪುರ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದೂರದಿಂದ ಅಡ್ಡಾದಿಡ್ಡಿ ಚಲಿಸಿ ಬೈಕ್ ಮೇಲೆ ಎರಗಿದೆ. ಅಪಘಾತದ ಶಬ್ದ ಕೇಳಿ ತಿರುಗಿ ನೋಡುವಷ್ಟರಲ್ಲಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ವಿಜಯ್ ರವರಿದ್ದ ಬೈಕ್ ಮೇಲೆ ಅಪ್ಪಳಿಸಿದ ಇನ್ನೋವಾ ಕಾರು ಕೆಲವು ಮೀಟರಿನಷ್ಟು ದೂರ ಎಳೆದುಕೊಂಡು ಹೋಗಿದೆ.

Also Read  ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

ವಿಷಯ ತಿಳಿದ ತಕ್ಷಣ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!
Scroll to Top