ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ ➤ ನಿಯಮ ಬದಲಾಯಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ತೀರ್ಮಾನಿಸಿದೆ.

ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆಯೇ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಹಾಗೂ ಉಳಿದ ರಾಜ್ಯದಿಂದ ಬಂದವರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ವಿಧಿಸಲು ಸರಕಾರ ಮುಂದಾಗಿತ್ತು. ಆದರೆ ರಾಜ್ಯ ಸರಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆಗಳನ್ನು ಮಾಡುತ್ತಿದ್ದಂತೆಯೇ ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರತೆ ಹೆಚ್ಚಳವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮತ್ತೆ ಆರಂಭದಲ್ಲಿ ಜಾರಿಯಲ್ಲಿದ್ದ 14 ದಿನಗಳ ಕ್ವಾರಂಟೈನ್ ನಿಯಮವನ್ನು ಜಾರಿಗೆ ತಂದಿದೆ.

Also Read  ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು

ಕೇವಲ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರವಲ್ಲ, ಯಾವುದೇ ರಾಜ್ಯದಿಂದ ಬಂದವರು ಕೂಡ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಲೇಬೇಕು ಎಂದು ರಾಜ್ಯ ಸರಕಾರ ಹೇಳಿದೆ. ಕ್ವಾರಂಟೈನ್ ನಿಯಮಗಳಲ್ಲಿ ಬದಲಾವಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿಗೆಯನ್ನು ನೀಡಿದ್ದು, ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

error: Content is protected !!