ದ.ಕ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ ➤ ಮನೆ-ಮನೆಗೆ ತೆರಳಿ ಮೀನು ಮಾರುತ್ತಿದ್ದ ವ್ಯಾಪಾರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.23, ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಇದೀಗ ಮೀನುಗಳನ್ನು ಮನೆಮನೆಗೆ ತೆರಳಿ ವ್ಯಾಪಾರ ನಡೆಸುತ್ತಿದ್ದ ಮಂಗಳೂರಿನ ಎಕ್ಕೂರು ನಿವಾಸಿಗೆ ಕೊರೋನಾ ಸೋಂಕು ಆವರಿಸಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ.

ಬಂದರಿನ ಮೀನು ವ್ಯಾಪಾರದ ಸ್ಥಳಕ್ಕೆ ತೆರಳಿ, ಅಲ್ಲಿಂದ ಮೀನುಗಳನ್ನು ತಂದು ಮನೆಮನೆಗೆ ಮೀನು ಮಾರಾಟ ಮಾಡುತ್ತಿದ್ದ ಎಕ್ಕೂರಿನ 27 ವರ್ಷದ ಯುವಕ ಶೀತದ ಸಮಸ್ಯೆಯಿಂದಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೊಳಪಟ್ಟಿದ್ದನು. ಈ ವೇಳೆ ಆತನ ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಿದ್ದು, ಸದ್ಯ ಆತನಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.

Also Read  ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹ ರಕ್ಷಣಾ ತಂಡದ ಗೃಹರಕ್ಷಕರಿಂದ ಶಾಲೆಯ ಮರದ ಗೆಲ್ಲುಗಳ ತೆರವು

error: Content is protected !!
Scroll to Top