ಪತ್ರಕರ್ತೆ ಗೌರಿ ಲಂಕೇಶ್ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.05. ಖ್ಯಾತ ಪತ್ರಕರ್ತೆ ಹಾಗೂ ಚಿಂತಕಿ ಗೌರಿ ಲಂಕೇಶ್ ಅವರನ್ನು ರಾಜಾರಾಜೇಶ್ವರಿ ನಗರದ ಅವರ ಮನೆಯ ಬಳಿಯಲ್ಲೇ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಇಂದು ರಾತ್ರಿ ನಡೆದಿದೆ.

ಪತ್ರಕರ್ತೆ ಗೌರಿ ಲಂಕೇಶ್ ಅವರು ರಾತ್ರಿ 8:00 ಗಂಟೆ ಸುಮಾರಿಗೆ ಮನೆಯ ಹೊರಗಡೆ ನಿಂತಿದ್ದ ಸಂದರ್ಭದಲ್ಲಿ ಅವರ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಗೌರಿ ಅವರ ಹಣೆ ಹಾಗೂ ಎದೆಗೆ ಗುಂಡು ತಗಲಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದು ಗೌರಿ ಲಂಕೇಶ್ ಮೃತಪಟ್ಟರು.

error: Content is protected !!

Join the Group

Join WhatsApp Group