ನಾಳೆ (ಜು.14) ದ್ವಿತೀಯ ಪಿಯು ಫಲಿತಾಂಶ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು: ಜು.13, ರಾಜ್ಯದಲ್ಲಿ ನಾಳೆ ( ಜು.14) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಾಳೆ  ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಲಿದೆ. ಫಲಿತಾಂಶದ ಮಾಹಿತಿಯನ್ನು ವಿದ್ಯಾರ್ಥಿಗಳ ಅಥವಾ ಅವರ ಪಾಲಕರ ಮೊಬೈಲ್  ಗೆ ಎಸ್ ಎಂ ಎಸ್ ಮೂಲಕ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಕೋವಿಡ್- 19 ಸೋಂಕು ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜಿಗೆ ಭೇಟಿ ನೀಡುವುದು ಬೇಡ. ಎಸ್ ಎಂಎಸ್ ಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಸಚಿವರು ಮನವಿ ಮಾಡಿದರು.

Scroll to Top