ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು: ಜು.16, ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಕೆಲಂದೂರು ಎಂಬಲ್ಲಿ ಇಂದು ನಡೆದಿದೆ.

ಮೃತರನ್ನು ಪಡುವನ್ನೂರು ಗ್ರಾಮದ ಕೆಲಂದೂರು ನಿವಾಸಿ ಗಣಪತಿ ಭಟ್ (58ವ) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಸಂಪ್ಯ ಎಸ್‌.ಐ. ಉದಯರವಿ ಹಾಗೂ ಈಶ್ವರಮಂಗಲ ಹೊರಠಾಣಾ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group