ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ನಾನು ಅವಶ್ಯಕತೆ ಬಿದ್ದರೆ ವಿರೋಧ ಪಕ್ಷದ ನಾಯಕರಾದ ಕುಮಾರ ಸ್ವಾಮಿ ಹಾಗೂ ಅಶೋಕ್ ಅವರ ಸಲಹೆಯನ್ನು ಪಡೆಯುವೆ. ನನಗೆ ರಾಜಕೀಯದಲ್ಲಿ 35 ವರ್ಷಗಳ ಅನುಭವವಿದ್ದು, ಹೇಗೆ ಆಡಳಿತ ನಡೆಸಬೇಕೆನ್ನುವುದು ಚೆನ್ನಾಗಿ ಗೊತ್ತಿದೆ ಎಂದಿದ್ದಾರೆ.

error: Content is protected !!

Join the Group

Join WhatsApp Group