ಜುಲೈ 31ರಂದು ಕರಾವಳಿಯಲ್ಲಿ ‘ಬಕ್ರೀದ್’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ಪ್ರವಾದಿ ಇಬ್ರಾಹೀಂ (ಅ) ಮತ್ತು ಅವರ ಪುತ್ರ ಇಸ್ಮಾಯೀಲ್ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜು.31ರ ಶುಕ್ರವಾರ ಕರಾವಳಿಯಲ್ಲಿ ಆಚರಿಸಲಾಗುವುದು ಎಂದು ಖಾಝಿಗಳಾದ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಅಲ್‌ಹಾಜ್ ಬೇಕಲ ಇಬ್ರಾಹೀಂ ಮುಸ್ಲಿಯಾರ್ ಪ್ರತ್ಯೇಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದ್ಸುಲ್‌ಹಜ್ ಪ್ರಥಮ ಚಂದ್ರದರ್ಶನವಾಗಿದೆ. ಅದರಂತೆ ಜು. 31ರಂದು ಬಕ್ರೀದ್ ಆಚರಿಸಲು ನಿರ್ಧರಿಸಲಾಗಿದೆ.

error: Content is protected !!

Join the Group

Join WhatsApp Group