ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!!

(ನ್ಯೂಸ್ ಕಡಬ) newskadaba.com ನವದೆಹಲಿ: ಜು.29., ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಗ್ರರು ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ.


ಅಫ್ಗಾನಿಸ್ತಾನದ ಲಷ್ಕರ್‌-ಎ-ತಯಬಾ ಹಾಗೂ ಜೈಷ್‌-ಎ-ಮೊಹಮ್ಮದ್‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್‌ ಇಂಟಲಿಜೆನ್ಸ್‌ ಸಹಾಯದೊಂದಿಗೆ ಭಾರತದಲ್ಲಿರುವ ಧಾರ್ಮಿಕ ಸ್ಥಳಗಳಿಗೆ ದಾಳಿ ನಡೆಸಲು ಸಂಚು ನಡೆಸಿವೆ. ಅತಿ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನು ಈ ಸಂಘಟನೆಗಳು ಮಾಡಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.


ಪಾಕಿಸ್ತಾನದಲ್ಲಿ 20 ಮಂದಿ ತಾಲಿಬಾನ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿದ್ದು, ಇದು ಜಮ್ಮು-ಕಾಶ್ಮೀರದಲ್ಲಿ ದಾಳಿ ನಡೆಸುವ ಸಲುವಾಗಿ ನೀಡುತ್ತಿರುವ ತರಬೇತಿಯಾಗಿದೆ. ಪಾಕಿಸ್ತಾನದ ಸೈನ್ಯದ ವಿಶೇಷ ಸೇನಾ ಪಡೆಯು ಜಲಾಲಾಬಾದ್‌ನಲ್ಲಿ ದಾಳಿ ನಡೆಸುವ ನಿಟ್ಟಿನಲ್ಲಿ ಈ ತರಬೇತಿ ನೀಡುತ್ತಿದ್ದು, ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆಯಲ್ಲಿ ಅಕ್ರಮವಾಗಿ ನುಸುಳಿ ಕಣಿವೆಯಲ್ಲಿ ಕೃತ್ಯ ನಡೆಸಲು ಇಂತಹ ತರಬೇತಿ ನೀಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಇಲಾಖೆ ನೀಡಿದೆ.

i
ದಾಳಿ ನಡೆಸುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದ ಹಿನ್ನೆಲೆ, ದೆಹಲಿ ಸೇರಿದಂತೆ ಅಯೋಧ್ಯೆ ಹಾಗೂ ಕಾಶ್ಮೀರದ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಮುಂಜಾಗ್ರತೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.

error: Content is protected !!

Join the Group

Join WhatsApp Group