ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ.

ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.

Also Read  ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ...!

ಮುನ್ನಾರ್ ದಕ್ಷಿಣ ಭಾರತದ ಜನಪ್ರಿಯ ಗಿರಿ ಧಾಮವಾಗಿದ್ದೂ  ಇಲ್ಲಿ ಸುತ್ತಲ್ಲೂ  ಇರುವ ನಿಸರ್ಗದ ಸೌಂದರ್ಯ ಕಣ್ಣಿಗೆ ಹಬ್ಬವಾಗಿದೆ. ಇಲ್ಲಿನ ಮಂಜು ಮುಸುಕಿದ ವಾತಾವರಣ, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಸದಾ ಹಸಿರಿನಿಂದ ಕಂಗೊಳಿಸುವ ಈ ಪ್ರದೇಶ ಈ ಭಾರಿಯ ಮಳೆಯಿಂದಾಗಿ ರೌದ್ರರೂಪ ತಾಳಿದೆ.

error: Content is protected !!
Scroll to Top