ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಹೊಲಿಗೆ ತರಬೇತಿ ಶಿಬಿರ ಇಂದು ಉದ್ಘಾಟನೆ ಮಾಡಲಾಯಿತು.

 

ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ರವರು ರಿಬ್ಬನ್ ಕಟ್ ಮಾಡುವ ಮೂಲಕ ಹೊಲಿಗೆ ಯಂತ್ರಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಅಧಿಕಾರಿ, ವಲಯ ಮೇಲ್ವಿಚಾರಕಾರು, ಜಿಲ್ಲಾ ನಿರ್ದೇಶಕರು, ಪಂಚಾಯತ್ ಅಭಿವೃದ್ದಿ ಅದಿಕಾರಿ ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.

Also Read  ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ

error: Content is protected !!
Scroll to Top