ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ➤ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.05:  ಚಾರ್ಮಾಡಿ ಘಾಟ್ ನಲ್ಲಿ ಮಂಜು ಕವಿದ ಹಿನ್ನೆಲೆಯಲ್ಲಿ ದಾರಿ ಕಾಣದೆ, ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ನಡೆದಿದೆ.

 

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ನುಗ್ಗಿತ್ತು.ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಮೂಲದ ಐದು ಮಂದಿ ಕಾರಿನಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ  ಸ್ಥಳೀಯರು ಆಗಮಿಸಿದ ಹಿಟಾಚಿ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿದ್ದಾರೆ.

Also Read  ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

 

error: Content is protected !!
Scroll to Top