ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.13: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ (ಸೋಮವಾರ) ಆರಂಭವಾಗಲಿದೆ. ‘ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

 

 

ಪೂಜಾ ಸೇವೆಗಳ ನಿಯಮಗಳು ಈ ಕೆಳಗಿನಂತಿವೆ:

* ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ.

* ದೇವಾಲಯ ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ತೆರೆದಿರುತ್ತದೆ.

* ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುವುದು.

* ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.

* ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುವುದು.

* ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು.

 

 

error: Content is protected !!

Join the Group

Join WhatsApp Group