ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19, ‘ಮುಂದಿನ ನವರಾತ್ರಿ, ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ ಎಂದು ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.

ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ದಸರಾ ಆಚರಣೆ ಕುರಿತು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿ ವಿಷಾದದ ಮಾತನ್ನು ನುಡಿದು ಕೊನೆಗೆ ಮೌನಕ್ಕೆ ಜಾರಿದರು.

ಅನಾರೋಗ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿ ಅವರು ಬಂಟ್ವಾಳದ ನಿವಾಸದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಆತ್ಮಚರಿತ್ರೆಯನ್ನೂ ಬರೆಯುತ್ತಿದ್ದಾರೆ.

error: Content is protected !!

Join the Group

Join WhatsApp Group