(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಚಿನ್ನದಂಗಡಿಯಿಂದ ಆಭರಣಗಳನ್ನು ಕಳವು ಮಾಡಿದ್ದ ನೇಪಾಳಿಗರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಐದು ಜನ ಕಳ್ಳರನ್ನು ನೇಪಾಲ ಮೂಲದವರು ಎಂದು ಗುರುತಿಸಲಾಗಿದೆ.
ಬೈಂದೂರಿನ ಶೀರೂರು ಗೋಲ್ಡ್ ಪ್ಯಾಲೇಸ್ ಜ್ಯುವೆಲ್ಲರಿಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಾವು ಕಳ್ಳತನ ಮಾಡಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ.
ಆರೋಪಿಗಳು ಗೂರ್ಖಾ ಹಾಗೂ ಫಾಸ್ಟ್ ಫುಡ್ ಕೆಲಸ ಮಾಡಿಕೊಂಡಿದ್ದರು ಎನ್ನುವ ಮಾಹಿತಿ ವಿಚಾರಣೆ ವೇಳೆ ತಿಳಿದು ಬಂದಿದೆ. ಇವರು ಬೇರೆ ಕಡೆಯೂ ಕೃತ್ಯ ಎಸಗಿದ್ದಾರಾ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.