ಬಂಟ್ವಾಳ: ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತಲೆಗೆ ಕಲ್ಲು ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.07: ಕೆಲಸದಲ್ಲಿ ನಿರತರಾಗಿದ್ದ ಸಿದ್ದಕಟ್ಟೆ ಬಳಿಯ ಸಂಗಬೆಟ್ಟುವಿನಲ್ಲಿ ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಕಾರ್ಮಿಕರ ತಲೆಗೆ ಕಲ್ಲು ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ಇಂದು ನಡೆದಿದೆ.

 

 

ಮೃತ ವ್ಯಕ್ತಿಯನ್ನು ಸಿದ್ದಕಟ್ಟೆಯ ಮಂಚಕಲ್ ಮೂಲದ ರಾಮಾನಂದ ಗೌಡ (30) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆ ಬಳಿಯ ಸಂಗಬೆಟ್ಟುವಿನಲ್ಲಿ ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಈ ಮನೆ ನಿರ್ಮಾಣಕ್ಕಾಗಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾಮಾನಂದ ಗೌಡ ಕಲ್ಲು ಕೆಲಸ ಮಾಡುತ್ತಿದ್ದು, ಇದ್ದಕ್ಕಿದ್ದಂತೆ ಒಂದು ಕಲ್ಲು ಕೆಳಗೆ ಬಿದ್ದು, ರಾಮಾನಂದ ಅವರ ತಲೆಬುರುಡೆಗೆ ತೀವ್ರ ಗಾಯವಾಗಿತ್ತು. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಬಂಟ್ವಾಳ ಗ್ರಾಮೀಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪ್ರಸನ್ನ ಮತ್ತು ಇತರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

error: Content is protected !!

Join the Group

Join WhatsApp Group