ಮಂತ್ರಿಗಳೊಂದಿಗೆ ಗ್ರಾಮಸ್ಥರ ಸಂವಾದ ➤ ಶಾಸಕ ಎಸ್. ಅಂಗಾರ, ಉಸ್ತುವಾರಿ ಸಚಿವರು ಭಾಗಿ

(ನ್ಯೂಸ್ ಕಡಬ) newskadaba.com ಕನಕಮಜಲು , ಅ. 09: ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು.

ಸಂವಾದದಲ್ಲಿ ಉಸ್ತುವರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಮಾತುಕತೆ ನಡೆಸಿದರು. ಕಾರ್ಯಕ್ರಮದಲ್ಲಿ ಶಾಸಕ ಎಸ್. ಅಂಗಾರ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಕರ್ನಾಟಕ ದಕ್ಷಿಣ ಭಾರತ ಸಹ ಸೇವಾ ಪ್ರಮುಖ್ ನ ಸೀತಾರಾಮ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ.ಪಂ ಸದಸ್ಯೆ ಶ್ರೀ ಮತಿ ಪುಷ್ಪವತಿ ಬಾಳಿಲ, ಸೇರಿದಂತೆ ಆನೇಕ ಗಣ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

 

error: Content is protected !!

Join the Group

Join WhatsApp Group