ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.19: ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

 

 

ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

error: Content is protected !!

Join the Group

Join WhatsApp Group