ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಗಳಿಗೆ 25 ಸಾವಿರ ರೂ ಪರಿಹಾರ ➤ ಸಿಎಂ ಬಿಸ್.ವೈ



(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ಕಳೆದೆರಡು ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಸುರಿದ ಮಹಾ ಮಳೆಯಿಂದಾಗಿ ಅನೇಕ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಇಂತಹ ಕುಟುಂಬಗಳ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಗಳಿಗೆ ರು. 25 ಸಾವಿರದ ಚೆಕ್ ನೀಡುವುದರ ಮೂಲಕ ಪರಿಹಾರ ವಿತರಿಸುವುದಾಗಿ ಘೋಷಿಸಿದ್ದಾರೆ.







ಮಳೆಯಿಂದ ಬೆಂಗಳೂರಿನಲ್ಲಿ ಸಂಕಷ್ಟಕ್ಕೀಡಾದಂತಹ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಮಳೆಯಿಂದ ಹಾನಿಗೊಳಗಾದಂತ ಕುಟುಂಬಕ್ಕೆ 25 ಸಾವಿರ ಪರಿಹಾರ ವಿತರಿಸಲಾಗುತ್ತದೆ. ದವಸ- ಧಾನ್ಯಗಳು ಹಾಳಾದ ಕುಟುಂಬಕ್ಕೂ ಪರಿಹಾರ ನೀಡಲಾಗುತ್ತದೆ. ಇನ್ನೆರಡು ದಿನ ಮಳೆ ಬಂದರೆ ಎದುರಿಸಬೇಕಾದ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.






error: Content is protected !!
Scroll to Top