ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  . 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

 

ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಸೋಂಕಿನಿಂದ ಬಂಧಿತರಾಗಿದ್ದಾರೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು. ಕೊರೊನಾ ವೈರಸ್ ಮುನ್ನೆಚ್ಚರಿಕೆ ನಡುವೆ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಸಮೇತ ಸಿಎಂ ಹಾಗೂ ಸಚಿವರು ನಂದಿ ಧ್ವಜ ಪೂಜೆಯಲ್ಲಿ ಭಾಗಿಯಾಗಿದ್ದರು.

Also Read  ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

error: Content is protected !!
Scroll to Top