ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.

 

 

ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತದನಂತರ ಕಾರ್ಯಕ್ರಮ ಮುಗಿದ ತಕ್ಷಣ ರಾತ್ರಿ 7.35 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Also Read  Mostbet Online Casino, Mostbet, Mosbet, Mostbet Bd, Mostbet Online Casino In Bangladesh Mostbet Online Betting, Mostbet Bookmaker Line, Mostbet Bookmaker Bonuses, 34

 

 

error: Content is protected !!
Scroll to Top