ಪುತ್ತೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಭರಣ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು.11: ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನ ಬಲ್ನಾಡು ಗ್ರಾಮದ ಕಾಡ್ಲ ಎಂಬಲ್ಲಿ ಕಳ್ಳತನ ಎಸಗಿರುವ ಘಟನೆ ಕಳೆದ ದಿನ ರಾತ್ರಿ ಬೆಳಕಿಗೆ ಬಂದಿದೆ.

 

 

ಕಳೆದ ದಿನ ರಾತ್ರಿ ದೀಪ ಹಚ್ಚಲು ಬಾಗಿಲು ತೆರೆದಾಗ ದೈವಸ್ಥಾನದ ಒಳಗಿರುವ ದೈವದ ಆಯುಧಗಳು ಹಾಗೂ ಆಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಎಸ್.ಐ ಉದಯ ರವಿ, ಪೊಲೀಸ್ ಸಿಬಂದಿಗಳು, ಶ್ವಾನ ದಳ ಹಾಗೂ ಬೆರಳುತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

 

 

error: Content is protected !!
Scroll to Top