ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, . 19. ಕಳೆದ ದಿನ ರಾತ್ರಿ ಕುಂದಾಪುರ ತಾಲೂಕು ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುವ ಉದ್ಧೇಶದಿಂದ ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನವನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

 

 

ತಕ್ಷಣವೇ ಅರಣ್ಯ ಇಲಾಖಾ ಸಿಬ್ಬಂದಿಗಳು ದಾಳಿ ಮಾಡಿದ್ದು, ಅವರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ. ಸುಮಾರು ಹದಿನೈದು ಕಿ.ಮೀ ಬೊಲೇರೊ ವಾಹನವನ್ನು ಬೆನ್ನಟ್ಟಿದ್ದ ಅಧಿಕಾರಿಗಳು ಬೊಲೇರೊ ವಾಹನ, ಕಬ್ಬಿಣದ ರಾಡ್, ಟರ್ಪಾಲ್ ಮತ್ತು ಒಂದು ಮೊಬೈಲ್ ಫೋನ್‍ನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯ ಇಲಾಖೆಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group