ಪುತ್ತೂರು: ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು . 24: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯದಲ್ಲಿ ಕಾರೊಂದು ರಸ್ತೆ ಬೇಲಿಗೆ ಢಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ನಡೆದಿದೆ.

 

 

ಕಾರಿನಲ್ಲಿದ್ದ ಕಾರು ಚಾಲಕನಿಗೆ ಎರಡು ದಿನದ ಹಿಂದೆ ಮದುವೆಯಾಗಿದ್ದು, ಕಾರಿನಲ್ಲಿ ದಂಪತಿಗಳು ಮತ್ತು ಕಾರು ಚಾಲಕನ ತಂಗಿ ಪ್ರಯಾಣಿಸುತ್ತಿದ್ದು, ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ನನ್ಯ ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಬೇಲಿಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ತಿರುಗಿ ನಿಂತಿದೆ. ಢಿಕ್ಕಿಯ ರಭಸಕ್ಕೆ ಕಾರು ಚಾಲಕ ಮತ್ತು ಕಾರಿನಲ್ಲಿದ್ದ ಈರ್ವರು ಗಾಯಗೊಂಡಿದ್ದಾರೆ.

Also Read  ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..!

 

Xl

error: Content is protected !!
Scroll to Top