ಮಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ➤ ರೌಡಿಶೀಟರ್ ಓರ್ವನ ಹತ್ಯೆ



(ನ್ಯೂಸ್ ಕಡಬ) newskadaba.com ಮಂಗಳೂರು . 26: ಕಳೆದ ದಿನ ರಾತ್ರಿ  ರೌಡಿಶೀಟರ್‌ ಓರ್ವನನ್ನು ಭೀಕರವಾಗಿ ಹತ್ಯೆಗೈದ  ಘಟನೆ ಬೊಕ್ಕಪಟ್ಟಣದ ಕರ್ನಲ್‌ ಗಾರ್ಡನ್‌ ಒಳಗಡೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಇಂದ್ರಜೀತ್‌ (29)  ಎಂದು ಗುರುತಿಸಲಾಗಿದೆ.





 

Xl

 

ಈತ ರೌಡಿಶೀಟರ್‌ ಎಂದು ತಿಳಿದು ಬಂದಿದ್ದು, ಕಳೆದ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ರಾತ್ರಿ ಸುಮಾರು 2 ಗಂಟೆಗೆ ಕರ್ನಲ್‌ ಗಾರ್ಡನ್‌ ಬಳಿ ಈತನ ಹತ್ಯೆಗೈಯಲಾಗಿದೆ ಹಾಗೂ ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂದು ಹೇಳಲಾಗತ್ತಿದೆ.






 

 

error: Content is protected !!
Scroll to Top