ಕಡಬ: ಶ್ರೀಕ್ಷೇತ್ರ ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾ ಕಚೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ . 26: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಡಬ ತಾಲೂಕು ಕಚೇರಿಯಯನ್ನು ಸುಳ್ಯ ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಸಭೆಯ ಅಧ್ಯಕ್ಷತೆ ವಹಿಸಿದ್ದರು.

 

 

ಧ.ಗ್ರಾ.ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ್, ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್, ಮಾಜಿ ಜಿ.ಪಂ ಸದಸ್ಯ ಸೈಯದ್ ಮೀರಾ ಸಾಹೇಬ್, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಶುಭ ಹಾರೈಸಿದ್ದರು. ವೇದಿಕೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಕೃಷ್ಣ ಶೆಟ್ಟಿ ಕಡಬ ಪುತ್ತೂರು ಕೆನರಾ ಬ್ಯಾಂಕಿನ ಎ.ಜಿ.ಎಮ್ ನಂಜುಂಡಪ್ಪ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ಕಡಬ ಗಣೇಶ್ ಬಿಲ್ಡಿಂಗ್ ಮಾಲಕ ಸುಂದರ ಗೌಡ ಮಂಡೆಕರ ಉಪಸ್ಥಿತರಿದ್ದರು. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಸ್ವಾಗತಿಸಿದರು. ಕೃಷಿ ಅಧಿಕಾರಿ ಉಮೇಶ್ ಬಿ ನಿರೂಪಿಸಿದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್.ಕಡಬ ಮೇಲ್ವಿಚಾರಕ ಬಾಬು ಸೇರಿದಂತೆ ಸೇವಾ ಪ್ರತಿನಿಧಿಗಳು ಸದಸ್ಯರುಗಳು ಉಪಸ್ಥಿರಿದ್ದರು.

 

error: Content is protected !!

Join the Group

Join WhatsApp Group