ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.

 

 

ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಗಿದೆ.

Also Read  ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top