ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 05: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ.

Also Read  ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

 

 

error: Content is protected !!
Scroll to Top